ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ, ಕಟೀಲು, ಮಂಗಳೂರು, ಮುಲ್ಕಿ, ಮೂಡುಬಿದ್ರಿ ಪರಿಸರದ ಮತ್ತು ಮಟ್ಟು ಲಕ್ಷ್ಮೀನಾರಾಯಣ ರಾವ್ ಮತ್ತು ಸಹೋದರರು, ಉಡುಪಿ ಬೈಲೂರು, ಗುಂಡಿಬೈಲು, ಚಿಟ್ಪಾಡಿ, ಹಾಲುಮತ ಮಹಾಸಭಾ, ಕಾರ್ಕಳ ಇಲ್ಲಿಯ ಭಕ್ತಾಭಿಮಾನಿಗಳು ಹೊರೆಕಾಣಿಕೆಯನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರು ಹಾಗೂ ಅರ್ಚಕರಾದ ಶ್ರೀ ವಾಸುದೇವ ಅಸ್ರಣ್ಣ, ಲಕ್ಷ್ಮೀನಾರಾಯಣ ಅಸ್ರಣ್ಣ, ವೆಂಕಟರಮಣ ಅಸ್ರಣ್ಣ, ಅನಂತ ಅಸ್ರಣ್ಣ, ಕಮಲಾದೇವಿ ಪ್ರಸಾದ ಅಸ್ರಣ್ಣ , ಹರಿನಾರಾಯಣ ಅಸ್ರಣ್ಣ, ಮಂಗಳೂರಿನ ಪ್ರದೀಪ್ ಕಲ್ಕೂರ್, ಹರಿಕೃಷ್ಣ ಪುನರೂರು, ಮೂಡಬಿದಿರೆಯ ಶ್ರೀಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು. ಪರ್ಯಾಯೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್,ಜೊತೆಕಾರ್ಯದರ್ಶಿ ರಾಜಗೋಪಾಲ ಭಟ್,ಪ್ರವೀಣ ಉಪಾಧ್ಯಾಯ,ಪೆರಂಪಳ್ಳಿ ವಾಸುದೇವಭಟ್, ಈಶ್ವರ ಚಿಟ್ಪಾಡಿ ಮೊದಲಾದವರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೆರವಣಿಗೆಯ ವ್ಯವಸ್ಥೆಯನ್ನು ಮಾಡಿದರು.
ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ, ಮಟ್ಟು ಗುಳ್ಳ ಬೆಳೆಗಾರರ ಸಂಘ ಮತ್ತು ಕೃಷಿಕರ ವತಿಯಿಂದ ಮಟ್ಟು ಗುಳ್ಳವನ್ನು ಹೊರೆಕಾಣಿಕೆಯಾಗಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸುನಿಲ್ ಡಿ.ಬಂಗೇರ, ಜಯಪ್ರಕಾಶ್ ಮಟ್ಟು,ಮಹೇಶ್ ಪೂಜಾರಿ, ಶೇಖರ ಬಂಗೇರ, ಪರಮೇಶ್ವರ ಅಧಿಕಾರಿ,ಪ್ರದೀಪ್ ರಾವ್, ಅವಿನಾಶ್ ಹಾಗೂ
ಪರ್ಯಾಯೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಜೊತೆಕಾರ್ಯದರ್ಶಿ ರಾಜಗೋಪಾಲ ಭಟ್, ಪ್ರವೀಣ ಉಪಾಧ್ಯಾಯ, ಪೆರಂಪಳ್ಳಿ ವಾಸುದೇವಭಟ್, ಈಶ್ವರ ಚಿಟ್ಪಾಡಿ ಮೊದಲಾದವರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೆರವಣಿಗೆಯ ವ್ಯವಸ್ಥೆಯನ್ನು ಮಾಡಿದರು.
ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀಕೃಷ್ಣ ಪ್ರಸಾದ ವಿತರಣೆಗಾಗಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ,ಕೊಟ್ಟಾರಿಗಳಾದ ರಾಘವೇಂದ್ರ ರಾವ್,ಜನಾರ್ಧನ ಭಟ್ ಹಾಗೂ ಮಠದ ಸಿಬ್ಬಂದಿಗಳು ‘ಒಲಿಪೆ’ (ಪಾಕದ್ರವ್ಯಗಳನ್ನು) ಯನ್ನು ಬಿರುದಾವಳಿ,ವಾದ್ಯಘೋಷಗಳೊಂದಿಗೆ ಅಷ್ಟಮಠಗಳಿಗೆ ನೀಡಿದರು.
ಶ್ರೀ ಕೃಷ್ಣಾಪುರ ಪರ್ಯಾಯೋತ್ಸವಕ್ಕೆ, ರಾಯಚೂರಿನ ಶ್ರೀಕೃಷ್ಣಭಕ್ತರಿಂದ 220 ಕ್ವಿಂಟಲ್ ಅಕ್ಕಿ ಮತ್ತು ಬೆಲ್ಲವನ್ನು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಮುಖಾಂತರ ಭಾವೀಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಗೆ ಪರ್ಯಾಯ ಕಾಣಿಕೆಯಾಗಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಪರ್ಯಾಯೋತ್ಸವ ಸಮಿತಿಯ ಅಧ್ಯಕ್ಷರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯರು, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಜೊತೆಕಾರ್ಯದರ್ಶಿ ರಾಜಗೋಪಾಲ ಭಟ್, ಪ್ರವೀಣ ಉಪಾಧ್ಯಾಯ, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀಕೃಷ್ಣಾಪುರ ಪರ್ಯಾಯೋತ್ಸವಕ್ಕೆ,ಕುಂಜಾರು ಗಿರಿಬಳಗ ಮತ್ತು ಗಿರಿಭಗಿನಿಯರ ವತಿಯಿಂದ ಹೊರೆಕಾಣಿಕೆ ಸಮರ್ಪಿಸಿದರು.
ಶ್ರೀ ಕೃಷ್ಣಾಪುರದ ಪರ್ಯಾಯೋತ್ಸವಕ್ಕೆ ಉಡುಪಿ ಜಿಲ್ಲಾ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಷ್ಟಿನ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು. ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಅವರು ಜೋಡುಕಟ್ಟೆಯಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.
ಪರ್ಯಾಯೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ರಘುಪತಿ ಭಟ್ ಪ್ರಸ್ತಾವಿಸಿ ಕೆಲವೇ ಶ್ರೀಮಂತರು ಸೇರಿ ಕಾರ್ಯಕ್ರಮ ಮಾಡುವುದಕ್ಕಿಂತ ಸಮಾಜದ ಪ್ರತಿಯೊಬ್ಬರೂ ತಮ್ಮ ಕಾಣಿಕೆಯನ್ನು ನೀಡಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗಹಿಸುವುದರಿಂದ ಮಹತ್ವ ಬರುತ್ತದೆ. ಕೃಷ್ಣ ಭಕ್ತರೆಲ್ಲರೂ ತಮ್ಮಿಂದ ಆಗುವಂತಹ ಕಾಣಿಕೆಗಳನ್ನು ನೀಡಿ ಪುನೀತರಾಗಿದ್ದೀರಿ ಎಂದರು. ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಸ್ವಾಗತಿಸಿ ವಂದಿಸಿದರು. ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೆರವಣಿಗೆಯ ವ್ಯವಸ್ಥೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಷ್ಟಿನ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳಾದ ಡಾ. ಎಲ್. ಎಚ್. ಮಂಜುನಾಥ್, ಪ್ರದೇಶಾಯಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕರಾದ ಗಣೇಶ್, ತಾಲೂಕು ನಿರ್ದೇಶಕರಾದ ರಾಮ್ ಕುಮಾರ್ ಹಾಗೂ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
ಇಂದಿರಾ ಶಿವ ರಾವ್ ಪಾಲಿಟೆಕ್ನಿಕ್ ಉಡುಪಿ ಇವರ ಹೊರೆಕಾಣಿಕೆ ಕಾರ್ಯಕ್ರಮದಲ್ಲಿ ಪ್ರಿನ್ಸಿಪಾಲ್ ಹಾಗೂ ಪದಾಧಿಕಾರಿಗಳು, ಅಧ್ಯಾಪಕರು, ಸಿಬ್ಬಂದಿ ವರ್ಗ, ಕಾಲೇಜು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಡುಪಿ ಶ್ರೀ ಕೃಷ್ಣಾಪುರ ಮಠ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರ ಈ ಬಾರಿಯ ಪರ್ಯಾಯೋತ್ಸವಕ್ಕಾಗಿ ಹೊರೆಕಾಣಿಕೆ ಅರ್ಪಿಸಲು ಸಂಸ್ಥೆಯ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಸಂಸ್ಥೆಯ ಪ್ರತ್ಯೇಕ ಜಾಗದಲ್ಲಿ ಬೆಳೆಸಿದ ತರಕಾರಿ ತೋಟದಲ್ಲಿ ಬೆಲೆಯಾಳದ ಸೌತೆಕಾಯಿ ಹಾಗೂ ಇತರ ತರಕಾರಿಗಳನ್ನು ಸಮರ್ಪಿಸಲಾಯಿತು.